— ಸಾರಾ ಅಬೂಬಕ್ಕರ್.

ಅಭ್ಯಾಸ ಪ್ರಶ್ನೋತ್ತರಗಳು

ಅ) ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ.

1.ರಾಹಿಲನು ಯಾರು  ?

ರಾಹಿಲನು ಒಬ್ಬ ವೈದ್ಯ ಸೈನಿಕ.

2.ರಾಹಿಲನು ತುರ್ತುಪರಿಸ್ಥಿತಿ ನಿರ್ವಹಣೆಗೆ ಭದ್ರವಾಗಿ ಹಿಡಿದುಕೊಂಡಿದ್ದೇನು ?

ರಾಹಿಲನು ತುರ್ತುಪರಿಸ್ಥಿತಿ ನಿರ್ವಹಣೆಗೆ ಬೇಕಾದ ಔಷಧ ಮತ್ತು ಶಾಸ್ತ್ರಚಿಕಿತ್ಸಾ ಸಾಮಾನುಗಳ ಪೆಟ್ಟಿಗೆಯನ್ನುಭದ್ರವಾಗಿ ಹಿಡಿದುಕೊಂಡಿದ್ದನು.

3.ಗಡಿ ಪ್ರದೇಶದಲ್ಲಿ ‘ಬ್ಲಾಕ್ ಔಟ್’ ನಿಯಮವನ್ನು ಏತಕ್ಕಾಗಿ ಪಾಲಿಸಲಾಗುತ್ತದೆ ?

ಗಡಿ ಪ್ರದೇಶದಲ್ಲಿ ವಿಮಾನ ದಾಳಿಯಿಂದ ರಕ್ಷಿಸಿಕೊಳ್ಳಲು ‘ಬ್ಲಾಕ್ ಔಟ್’ ನಿಯಮವನ್ನುಪಾಲಿಸಲಾಗುತ್ತದೆ.

4.ರಾಹಿಲನು ಮುದುಕಿಯ ಎದುರಿಗೆ ನುಡಿದ ಗಂಭೀರವಾದ ಮಾತು ಯಾವುದು  ?

ರಾಹಿಲನು ಮುದುಕಿಯ  ಎದುರಿಗೆ “ನಾನು ಯುದ್ಧ ಮಾಡುವ ಮೂರ್ಖರ ಕಡೆಯವನಲ್ಲ , ಸಂಕಷ್ಟಕ್ಕಿಡಾದ ಮನುಷ್ಯರ ಕಡೆಯವನು”ಎಂದುಗAಭೀರವಾದ ಮಾತನ್ನು ನುಡಿದನು.

5.ಯುದ್ಧದ ಬಗೆಗೆ ಮುದುಕಿಯು  ಏನೆಂದು ಗೊಣಗಿಕೊಂಡು ಬಾಗಿಲು ತೆರೆದಳು ?

“ಎಲ್ಲರಿಗೂ ದೇಹಕ್ಕೂ ಮನಸ್ಸಿಗೂ ಗಾಯಮಾಡುವುದೇ ಯುದ್ಧದ ಪರಿ” ಎಂದು ಗೊಣಗಿಕೊಂಡು ಬಾಗಿಲು ತೆರೆದಳು.

ಹೆಚ್ಚುವರಿ ಪ್ರಶ್ನೋತ್ತರಗಳು

6.ಬ್ಲಾಕ್ ಔಟ್ ನಿಯಮ ಎಂದರೇನು ?

ಯುದ್ಧದ ಕಾಲದಲ್ಲಿ ರಾತ್ರಿವೇಳೆ ಶತ್ರು ಸೈನಿಕರು ವೈಮಾನಿಕ ದಾಳಿಮಾಡಲು ಅವಕಾಶವಾಗದಂತೆ  ವಿದ್ಯುತ್ ದೀಪ,ಬೆಂಕಿಯನ್ನು  ಉರಿಸದೆ ಕತ್ತಲಿನಲ್ಲಿದ್ದು

ರಕ್ಷಿಸಿಕೊಳ್ಳುವುದನ್ನು ‘ಬ್ಲಾಕ್ ಔಟ್ ನಿಯಮ ’ ಎಂದು ಕರೆಯಲಾಗುತ್ತದೆ.

7.ಮುದುಕೀಯ ಕಣ್ಣುಗಳು ಕ್ಷಣಕಾಲ ರೋಷದಿಂದ ಏಕೆ ಕೆರಳಿದವು?