— ಲಕ್ಷ್ಮೀಶ.

ಅ ] ಒಂದು ವಾಕ್ಯದಲ್ಲಿ ಉತ್ತರಿಸಿ.

೧. ‘ ಜೈಮಿನಿ ಭಾರತ ‘ ಕಾವ್ಯವನ್ನು ಬರೆದ ಕವಿ ಯಾರು ?

ಜೈಮಿನಿ ಭಾರತ ಕಾವ್ಯವನ್ನು ಬರೆದ ಕವಿ ಲಕ್ಷ್ಮೀಶ

೨. ಯಜ್ಞಾಶ್ವವನ್ನು ಕಟ್ಟಿದವರು ಯಾರು ?

ಯಜ್ಞಾಶ್ವವನ್ನು ಕಟ್ಟಿದವರು ಲವ

೩ ಕುದುರೆಯನ್ನು ಲವನು ಯಾವುದರಿಂದ ಕಟ್ಟಿದನು ?

ಕುದುರೆಯನ್ನು ಲವನು ತನ್ನ ಉತ್ತರೀಯದಿಂದ ಕಟ್ಟಿದನು .

೪. ಮುನಿಸುತರು ಹೆದರಲು ಕಾರಣವೇನು ?

ಲವನು ಯಜ್ಞಾಶ್ವವನ್ನು ಕಟ್ಟಿ ಹಾಕಿದ್ದರಿಂದ ಮುನಿಸುತರು ಹೆದರಿದರು .

ಆ ] ಮೂರು ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿ .

೧. ವಾಲ್ಮೀಕಿ ಆಶ್ರಮಕ್ಕೆ ಯಜ್ಞಾಶ್ವವು ಬಂದ ಬಗೆಯನ್ನು ವಿವರಿಸಿ .

ಶ್ರೀರಾಮನು ಮಹರ್ಷಿಗಳ ಆದೇಶದಂತೆ ಅಶ್ವಮೇಧಯಾಗವನ್ನು ಕೈಗೊಂಡು , ಶತ್ರುಘ್ನನ ಬೆಂಗಾವಲಿನಲ್ಲಿ ಯಜ್ಞಾಶ್ವವನ್ನು ಕಳುಹಿಸಿದನು . ರಾಮನ ಆಜ್ಞೆಯಂತೆ ಹೊರಟ ಯಜ್ಞಾಶ್ವವನ್ನು ಭುಜಬಲ ಪರಾಕ್ರಮಿಗಳಾದ ರಾಜರುಗಳು ತಡೆಯಲು ಹೆದು ನಮಸ್ಕರಿಸಿ ಮುಂದೆ ಹೋಗಲು ಬಿಟ್ಟರು . ಹೀಗೆ ಯಜ್ಞಾಶ್ವವು ಭೂಮಿಯಲ್ಲೆಲ್ಲ ಸಂಚರಿಸುತ್ತ ವಾಲ್ಮೀಕಿಯ ಆಶ್ರಮದ ತೋಟದ ಹಸುರಾದ ಹುಲ್ಲನ್ನು ತಿನ್ನಲು ಒಳಹೊಕ್ಕಿತು .

೨. ಯಜ್ಞಾಶ್ವದ ಹಣೆಯಲ್ಲಿದ್ದ ಪಟ್ಟಿಯಲ್ಲಿ ಏನೆಂದು ಬರೆಯಲಾಗಿತ್ತು ?

ಯಜ್ಞಾಶ್ವದ ಹಣೆಯಲ್ಲಿದ್ದ ಪಟ್ಟಿಯಲ್ಲಿ ಭೂಮಂಡಲದಲ್ಲಿ ಕೌಸಲ್ಯಯು ಮಗನಾದ  ರಾಮನು ಒಬ್ಬನೇ ವೀರನು ಇದು ಅವನ ಯಜ್ಞಕುದುರೆ ಇದನ್ನು ತಡೆಯುವ ಸಾಮರ್ಥ್ಯವುಳ್ಳವರು ಯಾರೇ ಆದರು ತಡೆಯಲಿ ” ಎಂದ ಬರೆಯಲಾಗಿತ್ತು .

೩. ಕುದುರೆಯನ್ನುಕಟ್ಟುವ ವಿಚಾರದಲ್ಲಿ ಮುನಿಸುತರಿಗೂ ಲವನಿಗೂ ನಡೆದ ಸಂವಾದವನ್ನು ಬರೆಯಿರಿ.

ಲವನು ಆಶ್ರಮವನ್ನು ಹೊಕ್ಕ ಯಜ್ಞಾಶ್ವವನ್ನು ತನ್ನ ಉತ್ತರೀಯದಿಂದ ಬಾಳೆಯ ಗಿಡಕ್ಕೆ ಕಟ್ಟಿ ಹಾಕಿದ್ದನ್ನು ಕಂಡು ಹೆದರಿದ ಮುನಿಸುತರು ” ಬೇಡಬೇಡ ಅರಸುಗಳ ಕುದುರೆಯನ್ನು ಬಿಡು , ನಮ್ಮನ್ನು ಹೊಡೆಯವರು ” ಎಂದು ಹೇಳಿದರು . ಆಗ ಅವನು ನಗುತ “ ಬ್ರಾಹ್ಮಣರ ಮಕ್ಕಳು ಹೆದರಿದರೆ , ಜಾನಕಿಯ ಮಗನು ಇದಕ್ಕೆ ಹೆದರುವನೇ , ನೀವು ಹೋಗಿ ” ಎಂದು ಶೌರ್ಯದಿಂದ ಹೇಳಿದನು .